September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

ಉಜಿರೆ :ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.17 ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಬೆಳಿಗ್ಗೆ 9.00 ಗಂಟೆಗೆ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ನಡೆಯಲಿರುವುದು.


ಜಾಥಾಕ್ಕೆ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ ಚಾಲನೆ ನೀಡಲಿರುವರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶಿವಾನಂದ ಕಳವೆ, ಪರಿಸರ ಬರಹಗಾರರು ನಡೆಸಲಿದ್ದು, ಅಧ್ಯಕ್ಷತೆಯನ್ನು ಎಸ್. ಡಿ ಎಮ್. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್,, ವಹಿಸಲಿರವರು,.

ಮುಖ್ಯ ಅತಿಥಿಗಳಾಗಿ ಕೀರ್ತಿ ಕುಮಾರ್ ಎಸ್. ಇ. ಒ, ಕೆ. ಎಸ್.ಪಿ.ಸಿ. ಬಿ, ಮಂಗಳೂರು, ತಹಶೀಲ್ದಾರರು ಪೃಥ್ವಿ ಸಾನಿಕಮ್, ಶಿಕ್ಷಣಾಧಿಕಾರಿ ವೆಂಕಟೇಶ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಭಾಗವಹಿಸಲಿರುವರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸಂಭ್ರಮದ ಸೋಣದ ಕೋಲ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಗೀತೆ ಜತೆ ಸಾಹಿತ್ಯ ಸಾಂಗತ್ಯ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya
error: Content is protected !!