ವೇಣೂರು: ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಜೃಂಭಣೆಯಿಂದ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯ ಉದ್ದೇಶವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ನೀಡುವುದು.

ಮುಖ್ಯ ಅತಿಥಿಯಾಗಿ ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ.ಹೆಚ್ ಭಾಗವಹಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶ್ಲಾಘಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿ ಜೀವನದ ಮಹತ್ವ, ಪರಿಶ್ರಮದ ಶಕ್ತಿ, ಶಿಸ್ತು ಮತ್ತು ಗುರಿಯತ್ತ ನಿಭಾಯಿಸುವ ನಡೆಗಳ ಬಗ್ಗೆ ಸ್ಪಷ್ಟವಾದ ಮತ್ತು ಸ್ಪೂರ್ತಿದಾಯಕ ಸಂದೇಶವೊಂದನ್ನು ನೀಡಿದರು.
ಸಂಸ್ಥೆಯ ಸಂಚಾಲಕ ಗಣಿತ ಉಪನ್ಯಾಸಕ ಅಶ್ವಿತ್ ಕುಲಾಲ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಹಾಗೂ ಪ್ರಾಚಾರ್ಯರು ಹಾಗೂ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಆತ್ಮೀಯ ಶುಭಾಶಯಗಳನ್ನು ಸಲ್ಲಿಸಿದರು.
ಹಳೆಯ ವಿದ್ಯಾರ್ಥಿಗಳು ಹೊಸ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ಸಾಹದ ಮಾತುಗಳನ್ನು ಹಂಚಿಕೊಂಡು ಸ್ನೇಹಪೂರ್ಣವಾಗಿ ಸ್ವಾಗತಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪುಥ್ವಿ ಮತ್ತು ಸ್ವೀಕೃತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.











