July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

ಮೂಡಬಿದಿರೆ: ರಾಷ್ಟ್ರೀಯ ಪರೀಕ್ಷಾ ಮಂಡಳಿಯು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಪ್ರದೇಶ ಪರೀಕ್ಷೆ(ನೀಟ್)ಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅತ್ಯತ್ತಮ ಸಾಧನೆ ಮಾಡಿರುತ್ತಾರೆ. ವಿದ್ಯಾರ್ಥಿಯಾದ ಗಣೇಶ್ 579 ಅಂಕವನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಹಾಗೂ ಕೆಟಗೆರಿ ವಿಭಾಗದಲ್ಲಿ ಅಖಿಲ ಭಾರತ ಮಟ್ಟದಲ್ಲಿ 88 ರ್ಯಾಂಕ್ ಗಳಿಸಿ ಸಾಧನೆಗೈದಿದ್ದಾರೆ. ಈಗಾಗಲೇ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗಣೇಶ್ 600 ನೇ ರ್ಯಾಂಕ್ ಪಡೆದು ಮುಂಬೈ ಐಐಟಿಯಲ್ಲಿ ಸೀಟ್ ಪಡೆದುಕೊಂಡಿದ್ದನು.

ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿ:
720 ಅಂಕಗಳಲ್ಲಿ ಗಣೇಶ್ (579), ಅಭಿಷೇಕ್ ಸದಾಶಿವ ತೋರ್ಸೆ (553), ಯಶವಂತ್ ಬಿ (541), ಮಹದೇವ್ ಲಗಮಣ್ಣ ಬಿ ಪಾಟೀಲ್ (539), ವಿಶ್ವ ಸಂಗಾಪ್ಪ್ಪಶೆಟ್ಟರ್ (530),ಸೋಮನಗೌಡ ಅಸ್ಕಿ(529), ಪ್ರತೀಕ್ಷಾ ಶೆಟ್ಟಿ (516), ನೂತನ ಆರ್ ಗೌಡ (508), ಸಮೃದ್ಧ ಎಸ್ ಕೆ (506),ಹಿಬಾ ಸಿಮಲ್ (505), ಅಬ್ದುಲ್ ಜಬ್ಬರ್ (505), ಶರಣ್ ಯಂ ಎಸ್ (500), ಪೂರ್ವಿ ಎಂ(498) , ಚೇತನ್ ಕೆ ಎಂ (498), ಸೃಜನ್ ಸುರೇಶ್ ಕುಂಬರ್ (496),ಪುಷ್ಪಕ್ ಎ ಆರ್ (495), ತಸ್ಮಿಯಾ ಎಸ್ (494), ಮನೋಜ್ ಬಿ ಎನ್ (493),ಶಶಾಂಕ್ (484) ,ನಿವೇದಿತಾ ಹಿರೇಮಠ (482), ರವಿಶಂಕರ್ ಎಂ ಎಂ (479), ಪತಂಜಲಿ ಬಂಗೇರ (478), ಲಕ್ಷ್ಮಿ (475), ತನಿಷ್ಕಾ ಎಸ್ ಕೆ (473),ವೇದಿಕ್ ರಾಜ್ ಅರಸ್ ಎಂ ಸಿ (467), ಅತವಳಿಗಿ ಪೂಜಾ(466), ಅಕ್ಷತಾ ಜೆ (463), ನಿತಿನ್ ಡಿ ವೈ (462), ಆದರ್ಶ್ ಎಲ್ ಜಿ (457)ಫಾತಿಮಾ ಅಶುರ (454), ಈಶ್ವರ್ ಕಬನೂರಿ (453), ಸಂಗೀತ ಆರ್ ಡಿ (451) ಪಡೆದು ಸಾಧನೆ ಮಾಡಿರುತ್ತಾರೆ.

500 ಕ್ಕಿಂತಲೂ ಹೆಚ್ಚು ಅಂಕಗಳನ್ನು 12 ವಿದ್ಯಾರ್ಥಿಗಳು, 450 ಕ್ಕಿಂತಲೂ ಹೆಚ್ಚು ಅಂಕವನ್ನು 32 ವಿದ್ಯಾರ್ಥಿಗಳು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಈ ಎಲ್ಲ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ನೀಡುತ್ತಿರುವ ಅತ್ಯತ್ತಮ ಕೋಚಿಂಗ್ ನಿಂದ ಈ ಒಂದು ಸಾಧನೆ ಮಾಡಲು ಸಾಧ್ಯವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಈ ವರ್ಷ ಕಾಲೇಜಿನಿಂದ ಕೋಚಿಂಗ್ ಪಡೆದು ಉತ್ತಮ ಅಂಕಗಳಿಸಿದ ಹೆಚ್ಚಿನ ವಿದ್ಯಾರ್ಥಿಗಳಿಗೆ ಸರ್ಕಾರಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟ್ ಲಭಿಸುವ ನಿರೀಕ್ಷೆ ಇದೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದರು.

Related posts

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya
error: Content is protected !!