September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಬಳoಜ :ವಲಯದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ , ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮನುಷ್ಯರು ಬದುಕ ಬೇಕಾದರೆ ಪರಿಸರ ನಮಗೆ ತೀರಾ ಅವಶ್ಯವಾಗಿ ಬೇಕು ಗಿಡವನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಯೋಜನೆಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಪ್ರಮೋದ್ ಕುಮಾರ್ ಜೈನ ಮಾತನಾಡಿ ಕಾಡಿನಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುತ್ತದೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗುತ್ತದೆ , ಆದರಿಂದ ಎಲ್ಲರೂ ಗಿಡಗಳನ್ನು ನೆಟ್ಟು ಅದರ ರಕ್ಷಣೆ ಮಾಡಬೇಕು ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದೇಜಪ್ಪ ಪೂಜಾರಿ, ಬಳoಜ ಗ್ರಾಮ ಪಂಚಾಯತ್ ಸದಸ್ಯೆ & ವಿಪತ್ತು ಘಟಕದ ಬೇಬಿ ನಾರಾಯಣ, ಸ್ವಚ್ಛತಾ ಸೇನಾನಿ ಅಬೂಬಕರ್, ತಾಲೂಕು ನೋಡಲ್ ಅಧಿಕಾರಿ ಸುರೇಶ್ , ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿ ಪ್ರಮೀಳಾ & ಪ್ರಗತಿ ಬಂಧು, ಸ್ವಸಹಾಯ & ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!