24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 49ನೇ ವರ್ಷದ ನೂತನ ಸಮಿತಿಯನ್ನು ರಚಿಸಲಾಯಿತು.ಅಧ್ಯಕರಾಗಿ ಚಂದ್ರಕಾಂತ ಪ್ರಭು ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬಂಗೇರ ಕೂಳೂರು ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ 48ನೇ ಸಾಲಿನ ಕಾರ್ಯದರ್ಶಿ ವಿಜಯ ಕುಮಾರ್ ರೈ ಇವರು 2024ನೇ ಸಾಲಿನ ಆಯ-ವ್ಯಯ ವೆಚ್ಚವನ್ನು ಮಂಡಿಸಿದರು. ಸಮಿತಿಯ ಉಪಾಧ್ಯಕ್ಷ ಕೊರಗಪ್ಪ ನಾಯ್ಕ ಇವರು ಇತ್ತೀಚಿಗೆ ನಿಧನರಾದ ಗಜಾನನ ವಝ,ಜಯರಾಮ್ ಕೆ, ಕಲ್ಯಾಣಿ ಹಾಗೂ ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ಎಲ್ಲರಿಗೂ ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ನುಡಿ ನಮನ ಸಲ್ಲಿಸಿದರು.

ಯಶವಂತ ಶೆಟ್ಟಿ ಪ್ರಾರ್ಥಿಸಿದರು. ವಿಜಯ ಕುಮಾರ್ ರೈ , ಸ್ವಾಗತಿಸಿ ಗಣೇಶ್ ಬಂಗೇರ ಕೂಳೂರು ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya
error: Content is protected !!