September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 49ನೇ ವರ್ಷದ ನೂತನ ಸಮಿತಿಯನ್ನು ರಚಿಸಲಾಯಿತು.ಅಧ್ಯಕರಾಗಿ ಚಂದ್ರಕಾಂತ ಪ್ರಭು ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬಂಗೇರ ಕೂಳೂರು ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ 48ನೇ ಸಾಲಿನ ಕಾರ್ಯದರ್ಶಿ ವಿಜಯ ಕುಮಾರ್ ರೈ ಇವರು 2024ನೇ ಸಾಲಿನ ಆಯ-ವ್ಯಯ ವೆಚ್ಚವನ್ನು ಮಂಡಿಸಿದರು. ಸಮಿತಿಯ ಉಪಾಧ್ಯಕ್ಷ ಕೊರಗಪ್ಪ ನಾಯ್ಕ ಇವರು ಇತ್ತೀಚಿಗೆ ನಿಧನರಾದ ಗಜಾನನ ವಝ,ಜಯರಾಮ್ ಕೆ, ಕಲ್ಯಾಣಿ ಹಾಗೂ ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ಎಲ್ಲರಿಗೂ ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ನುಡಿ ನಮನ ಸಲ್ಲಿಸಿದರು.

ಯಶವಂತ ಶೆಟ್ಟಿ ಪ್ರಾರ್ಥಿಸಿದರು. ವಿಜಯ ಕುಮಾರ್ ರೈ , ಸ್ವಾಗತಿಸಿ ಗಣೇಶ್ ಬಂಗೇರ ಕೂಳೂರು ವಂದಿಸಿದರು.

Related posts

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ನಾರಾವಿ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಲಾಯಿಲ ಜನಸ್ಪಂದನ ಸಭೆ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya
error: Content is protected !!