22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 49ನೇ ವರ್ಷದ ನೂತನ ಸಮಿತಿಯನ್ನು ರಚಿಸಲಾಯಿತು.ಅಧ್ಯಕರಾಗಿ ಚಂದ್ರಕಾಂತ ಪ್ರಭು ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬಂಗೇರ ಕೂಳೂರು ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ 48ನೇ ಸಾಲಿನ ಕಾರ್ಯದರ್ಶಿ ವಿಜಯ ಕುಮಾರ್ ರೈ ಇವರು 2024ನೇ ಸಾಲಿನ ಆಯ-ವ್ಯಯ ವೆಚ್ಚವನ್ನು ಮಂಡಿಸಿದರು. ಸಮಿತಿಯ ಉಪಾಧ್ಯಕ್ಷ ಕೊರಗಪ್ಪ ನಾಯ್ಕ ಇವರು ಇತ್ತೀಚಿಗೆ ನಿಧನರಾದ ಗಜಾನನ ವಝ,ಜಯರಾಮ್ ಕೆ, ಕಲ್ಯಾಣಿ ಹಾಗೂ ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ಎಲ್ಲರಿಗೂ ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ನುಡಿ ನಮನ ಸಲ್ಲಿಸಿದರು.

ಯಶವಂತ ಶೆಟ್ಟಿ ಪ್ರಾರ್ಥಿಸಿದರು. ವಿಜಯ ಕುಮಾರ್ ರೈ , ಸ್ವಾಗತಿಸಿ ಗಣೇಶ್ ಬಂಗೇರ ಕೂಳೂರು ವಂದಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘ ರಚನೆ, ಪೋಷಕರ ಸಭೆ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya
error: Content is protected !!