24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!