September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!