23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya
error: Content is protected !!