23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya
error: Content is protected !!