24.1 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಜೂ. 15 ರಂದು ನಡೆದಿದೆ.

ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.

Related posts

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya
error: Content is protected !!