ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳ ಪದಾಧಿಕಾರಿಗಳ ಆಯ್ಕೆ ಹಾಗೂ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ತೆಗೆದುಕೊಂಡ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವು ರಘು ದೇವಾಡಿಗ ಅಧ್ಯಕ್ಷತೆಯಲ್ಲಿ ಜೂ.15ರಂದು ನಡೆಯಿತು.
ಅಧ್ಯಕ್ಷರಾಗಿ ರಘು ದೇವಾಡಿಗ, ಕಾರ್ಯದರ್ಶಿಯಾಗಿ ಹರೀಶ್ ಮಡಿವಾಳ, ಉಪಾಧ್ಯಕ್ಷರಾಗಿ ರೇಖಾ, ವಿನಯ, ಮೋಹಿನಿ, ಜಯ, ಕೋಶಾಧಿಕಾರಿಯಾಗಿ ಗಣೇಶ್ ಪೂಜಾರಿ, ಸಂಚಾಲಕರಾಗಿ ಇಂದುಧರ್ ಕೋಹಿನೂರು, ಸಂಘಟನಾ ಕಾರ್ಯದರ್ಶಿಯಾಗಿ ಶಾರದ ಶೆಟ್ಟಿ, ಸದಾಶಿವ ಖಂಡಿಗ, ಮಂಜುನಾಥ್ ಆಚಾರ್ಯ ಆಯ್ಕೆಯಾದರು.
ಮಕ್ಕಳ ಮಂಡಳಿಯ ಅಧ್ಯಕ್ಷರಾಗಿ ಶ್ರೀನಿಧಿ, ಉಪಾಧ್ಯಕ್ಷರಾಗಿ ಶುಯಾಶ್, ಸಾನ್ವಿ, ಕಾರ್ಯದರ್ಶಿಯಾಗಿ ಸಾಕ್ಷಿ, ಜೊತೆ ಕಾರ್ಯದರ್ಶಿಯಾಗಿ ರಿಶಾನ್, ಸಂಘಟನಾ ಕಾರ್ಯದರ್ಶಿಯಾಗಿ ರಶ್ಮಿ ಮತ್ತು ಆಕಾಶ್ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದ ಸಂಚಾಲಕ ಹರೀಶ್ ನೆರಿಯ ಭಾಗವಹಿಸಿದರು.