September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

ಉಜಿರೆ ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪರಾದ  ಡಾ. ಲಕ್ಷ್ಮೀನಾರಾಯಣರವರು ಎನ್ ಎಸ್ ಎಸ್ ನ ಧ್ಯೇಯ,ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ.ರವರು  ” ಎನ್ಎಸ್ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಅವಕಾಶವಾಗಿದ್ದು, ಸ್ವಯಂ ಸೇವಕರಾಗಿ  ಇಲ್ಲಿ ತಮ್ಮನ್ನು ಸರಿಯಾಗಿ  ತೊಡಗಿಸಿಕೊಂಡಾಗ ನಿಜವಾದ ವ್ಯಕ್ತಿತ್ವ ಮೂಡಿಸಿಕೊಳ್ಳಲು ಸಾಧ್ಯ “ಎಂದು ಹೇಳಿದರು.

ವೇದಿಕೆಯಲ್ಲಿ ಎನ್ಎಸ್ಎಸ್ ನಿಕಟಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್  ಎಸ್., ಸಹಯೋಜನಾಧಿಕಾರಿ ಶೋಭಾ ಪಿ  ಉಪಸ್ಥಿತರಿದ್ದರು. 

ಸ್ವಯಂ ಸೇವಕಿ  ಮೌಲ್ಯ ಅತಿಥಿಗಳ ಪರಿಚಯಿಸಿದರು. ಸ್ವಯಂ ಸೇವಕರಾದ  ಸಂತೋಷ್ ನಿರೂಪಿಸಿ, ಸಂದೀಪ್ ಸ್ವಾಗತಿಸಿ ಸ್ವಯಂಸೇವಕಿ ಪಲ್ಲವಿ ವಂದಿಸಿದರು.

Related posts

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya
error: Content is protected !!