24.6 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

ಬೆಳ್ತಂಗಡಿ : ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಟ್ಟದ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ರೈತರ ಒಂದು ದಿನದ ಹೊರ ಆವರಣ ಕೃಷಿ ತರಬೇತಿಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎನ್ನುತ್ತಾ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೃಷಿ ಅಧಿಕಾರಿ ಗಣೇಶ್ ಇವರು ಇಲಾಖಾ ಸೌಲಭ್ಯದಡಿ ಸಿಗುವ ಸವಲತ್ತುಗಳಿಗೆ ಉಂಟಾಗುವ ತಾಂತ್ರಿಕ ತೊಂದರೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿ ಇಲಾಖಾ ಮಾಹಿತಿ ನೀಡಿದರು. ಜಿಲ್ಲಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಇವರು ತೆಂಗು ಬೆಳೆ ನಿರ್ವಹಣೆ ಮತ್ತು ಅಡಿಕೆ ಕೊಳೆ ರೋಗ ಪರಿಹಾರ ಬಗ್ಗೆ ಪ್ರಾತ್ಯಕ್ಷಿಕ ಮೂಲಕ ರೈತರಿಗೆ ನೀಡಿದರು. ಒಕ್ಕೂಟದ ಕೃಷಿಸಖಿ ಭಾಗಿರಥಿ ನ್ಯಾಚುರಲ್ ಫಾರ್ಮಿಂಗ್ ಅರ್ಜಿಯ ಬಗ್ಗೆ, ಕಿಸಾನ್ ಸಮ್ಮಾನ್ ಯೋಜನೆ ಬಗ್ಗೆ, ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು. ಮಲೆಬೆಟ್ಟಿನ ಆಸುಪಾಸಿನ ರೈತರು ಆಸಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡಿರುತ್ತಾರೆ.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯಿತಿನ ಸದಸ್ಯರಾದ ಅನಿಲ್ ಡಿಸೋಜ, ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ದೀಪ ಜಗದೀಶ್, ಒಕ್ಕೂಟದ ಸಿಬ್ಬಂದಿಗಳಾದ ಎಮ್.ಬಿ.ಕೆ ಸುಜಾತ, ಎಲ್.ಸಿ.ಆರ್.ಪಿ ಸಚಿತ, ಪಶುಸಖಿ ಏಕಲತಾ ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಸ್ವಾಗತಿಸಿ, ಕೃಷಿಕರಾದ ಗೋಪಾಲಗೌಡ ಬಾಜಿಮಾರು ವಂದಿಸಿದರು.

Related posts

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!