24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ವರದಿ

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

ಕೊಕ್ಕಡ : ಮನೆಯ ಗೊದ್ರೆಜ್ ನಲ್ಲಿಟ್ಟಿದ ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ರೆಖ್ಯಾದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ: ಶ್ರೀಮತಿ ಕುಸುಮರವರು ತನ್ನ ಗಂಡ ಅಣ್ಣಿ @ ಆನಂದ ಗೌಡ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಕಟ್ಟೆ ಎಂಬಲ್ಲಿ ವಾಸವಿದ್ದು ಇಬ್ಬರು ದಿನಾ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಕೊಟ್ಟಿಗೆಯಲ್ಲಿ ಬಚ್ಚಿಟ್ಟು ಕೆಲಸಕ್ಕೆ ಹೋಗಿ ಸಂಜೆ ವಾಪಾಸು ಮನೆಗೆ ಬರುತ್ತಿದ್ದರು. ಕುಸುಮ ಬಳಿ ಸುಮಾರು 3 ಪವನ್ ತೂಕದ ಕರಿಮಣಿ ಸರ. ಸುಮಾರು 1 ಪವನ್ ತೂಕದ ಬಳೆ, ಸುಮಾರು 2 ಪವನ್ ತೂಕದ ಚಿನ್ನದ ಚೈನ್, ಸುಮಾರು ಅರ್ಧ ಪವನ್ ತೂಕದ ಒಂದು ಜೊತೆ ಕಿವಿಯೋಳೆ ಒಟ್ಟು ರೂ 2,60,000 ರೂಪಾಯಿ ಅಂದಾಜು ಮೌಲ್ಯದ 52 ಗ್ರಾಂ ಚಿನ್ನಾಭರಣವಿತ್ತು.

ಚಿನ್ನಾಭರಣವನ್ನು ಮೇ.23 ರಂದು ಕೊನೆಯದಾಗಿ ನೋಡಿರುತ್ತಾರೆ. ಕುಸುಮ ಹಾಗೂ ಗಂಡ ಆನಂದ ಗೌಡ ಶಿರಾಡಿ ದೇವಸ್ಥಾನಕ್ಕೆ ಹೋಗುವ ಸಲುವಾಗಿ ಜೂ.14 ರಂದು ಸಂಜೆ 6.30 ಗಂಟೆ ಸುಮಾರಿಗೆ ಗೊದ್ರೆಜ್ ನಲ್ಲಿಟ್ಟ ಚಿನ್ನಾಭರಣವನ್ನು ತೆಗೆಯಲು ಹೋದಾಗ ಗೊದ್ರೆಜಿಗೆ ಹಾಕಿದ್ದ ಕೀ ಹಾಕಿದ ಸ್ಥಿತಿಯಲ್ಲಿ ಇತ್ತು. ಗೊದ್ರೆಲ್ನಲ್ಲಿಟ್ಟಿದ್ದ ಚಿನ್ನಾಭರಣ ಯಾರೋ ಕಳ್ಳರು ಕಳವು ಮಾಡಿರುತ್ತಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.15 ರಂದು ಕುಸುಮ ದೂರು ನೀಡಿದ್ದಾರೆ.

Related posts

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya
error: Content is protected !!