July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS MS (GENERAL SURGERY) ಜನರಲ್ ಸರ್ಜನ್,ಡಾ| ಕಿರಣ್ ಕುಮಾ‌ರ್ MBBS MS (GENERAL SURGERY)ಜನರಲ್ ಸರ್ಜನ್ ಪಾಲ್ಗೊಳ್ಳುವರು.

ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು (ಕಿಬ್ಬೊಟ್ಟೆಯ ನೋವು, ಕಾಮಾಲೆ), ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯುವುದು.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ವಿ.ಸೂಚನೆ: ಸ೦ಪೂರ್ಣ ಸುರಕ್ಷಾ ವಿಮೆ ಹೊಂದಿರುವವರು ವಿಮಾ ಕಾರ್ಡಿನ ಪ್ರತಿಗಳನ್ನು ತರತಕ್ಕದ್ದು. ಹೆಸರು ನೋಂದಾಯಿಸಲು ಸಂಪರ್ಕಿಸಿ: 7760397878 / 8073349216

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!