23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರು ಹಾಗೂ ಹೊಸ ಜೇಸಿ ಹಳೆ ಜೇಸಿಗಳ ಮಹಾಸಂಗಮ ಕಾರ್ಯಕ್ರಮ ಇತ್ತೀಚೆಗೆ ಗುರುವಾಯನಕೆರೆಯ ಬಂಟರ ಭವನದಲ್ಲಿ ಜರಗಿತು. ಹಳೇ ಬೇರು ಹೊಸ ಚಿಗುರು ಎಂಬ ಕಲ್ಪನೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿಯನ್ನು ಮುನ್ನಡೆಸಿದ ಎಲ್ಲಾ ಪೂರ್ವಾಧ್ಯಕ್ಷರು ಹಾಗೂ ಪೂರ್ವ ಜೆಸಿರೇಟ್ ಅಧ್ಯಕ್ಷರುಗಳನ್ನು ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಜೆಸಿಐ ಬೆಳ್ತಂಗಡಿಯ ಸ್ಥಾಪಕ ಅಧ್ಯಕ್ಷ ಜೇಸಿ ಪ್ರೊಫೆಸರ್ ಶ್ರೀರಾಮ ಕಾರಂತ ಗೌರವಾರ್ಪಣ ಕಾರ್ಯಕ್ರಮವನ್ನು ನಡೆಸಿ ಸಭೆಯನ್ನುದ್ದೇಶಿಸಿ ಜೆಸಿಐ ಬೆಳ್ತಂಗಡಿಯ ಸ್ಥಾಪನೆಯ ಕುರಿತಂತೆ ಮಾತನಾಡಿ ಎಲ್ಲಾ ಜೇಸಿಗಳಿಗೆ ಶುಭ ಹಾರೈಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಡಿ ಭಾರತೀಯ ಭೂಸೇನೆಯ ನಿವೃತ್ತ ಸೈನಿಕ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ಶ್ರೀ ವಿಕ್ರಂ ಜೆಎನ್ ವಂಜಾರೆ ಇವರನ್ನು ಹಾಗೂ ಕುತ್ಲೂರಿನ ಮಹಿಳಾ ಆಟೋ ಚಾಲಕಿ ಸಾಧಕಿ ಅರುಣಾ ಹೆಗ್ಡೆ ಕುತ್ಲೂರು ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು.

ಮಹಾಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಆಗಮಿಸಿದ ರಾಷ್ಟ್ರೀಯ ತರಬೇತುದಾರರು ಜೇಸಿ ಸೀತಾರಾಮ ಕೇವಳ ಇವರು ಹಳೆ ಬೇರು ಹೊಸ ಚಿಗುರು ಎಂಬ ವಿಷಯದಲ್ಲಿ ಸವಿಸ್ತಾರವಾಗಿ ಮಾತನಾಡಿ ಜೇಸಿಯಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಲ್ಲಿ ಮಾತ್ರವೇ ಸದಸ್ಯರ ವ್ಯಕ್ತಿತ್ವ ವಿಕಸನ ಸಾಧ್ಯ ನಮಗೆ ಅರಿವಿಲ್ಲದಂತೆಯೇ ನಮ್ಮ ವ್ಯಕ್ತಿತ್ವ ಮಾರ್ಪಾಡಾಗುವುದು ಹಾಗೂ ಸಮಾಜದಲ್ಲಿ ಒಬ್ಬ ಗುರುತಿಸಬಲ್ಲ ವ್ಯಕ್ತಿಯಾಗಿ ಬೆಳೆಯಬಲ್ಲನು ಹಾಗೂ ಯಾವ ಸಂಸ್ಥೆಯು ನೀಡದ ತರಬೇತಿಗಳು ನಮ್ಮ ಜೇಸಿಯಲ್ಲಿದೆ ಜೇಸಿಗಳ ಬೆಳವಣಿಗೆಯ ಹಲವು ಮಜಲುಗಳನ್ನು ತನ್ನ ಪ್ರಖರ ಮಾತುಗಳ ಮೂಲಕ ಸಭೆಯ ಮನಗೆದ್ದರೂ.


ಸಭೆಯ ವೇದಿಕೆಯಲ್ಲಿ ಜೆಸಿರೇಟ್ ವಿಭಾಗದ ಪೂರ್ವ ರಾಜ್ಯಾಧ್ಯಕ್ಷೇ ಜೆಸಿರೆಟ್ ಸುಮಿತ್ರಾ ಕಾರಂತ್ ವಲಯ 15ರ ಪ್ರಾಂತ್ಯ ‘ಇ’ಯಾ ವಲಯ ಉಪಾಧ್ಯಕ್ಷ ಜೇಸಿ ಸುಹಾಸ್ ಮರಿಕ್ಕೆ, ಪ್ರಾಂತ್ಯ ‘ಡಿ’ ಯ ವಲಯ ಉಪಾಧ್ಯಕ್ಷ ರಂಜಿತ್ ಎಚ್‌ಡಿ ಗೌರವ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮಹಾಸಂಗಮ ಕಾರ್ಯಕ್ರಮದ ಸಭಾಧ್ಯಕ್ಷ ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಈ ಕಾರ್ಯಕ್ರಮವು ತನ್ನ ಕನಸಿನ ಕಾರ್ಯಕ್ರಮವಾಗಿದ್ದು ಎಲ್ಲಾ ಪೂರ್ವ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಒಗ್ಗೂಡಿಸಬೇಕೆಂಬ ಸಣ್ಣ ಪ್ರಯತ್ನ ಇದು. ಹೆಚ್ಚಿನ ಎಲ್ಲಾ ಪೂರ್ವ ಅಧ್ಯಕ್ಷರು ಕುಟುಂಬ ಸಮೇತರಾಗಿ ಭಾಗವಹಿಸಿರುವುದು ಸಂತೋಷವಾಗಿದೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಕಾರ್ಯಕ್ರಮದ ನಿರ್ದೇಶಕ ಪ್ರಶಾಂತ ಲಾೖಲ ಪ್ರಾಸ್ತಾವಿಕವಾಗಿ ಮಾತನಾಡಿದರು ಜೇಸಿ ಹೇಮಾವತಿ ಕೆ ಇವರು ಗೌರವಾರ್ಪಣ ಕಾರ್ಯಕ್ರಮವನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ನಾಲ್ಕು ಜನ ನೂತನ ಸದಸ್ಯರನ್ನು ಜೆಸಿಐ ಬೆಳ್ತಂಗಡಿಗೆ ಸೇರ್ಪಡೆಗೊಳಿಸಲಾಯಿತು, ನೂತನ ಜೇಸಿಗಳ ಪರಿಚಯವನ್ನು ಜೆಜೆಸಿ ದೀಪ್ತಿ ಕುಲಾಲ್ ವಾಚಿಸಿದರು ಸನ್ಮಾನಿತರ ಪರಿಚಯವನ್ನು ಜೇಸಿ ಸುಧೀರ್ ಕೆ ಎನ್ ಹಾಗೂ ದಿಕ್ಸೂಚಿ ಭಾಷಣಗಾರರ ಪರಿಚಯವನ್ನು ಜೇಸಿ ರಕ್ಷಿತ್ ಅಂಡಿಜೆ ಮಾಡಿದರು. ಕಾರ್ಯದರ್ಶಿ ಪ್ರಮೋದ್ ಕೆ ಇವರು ವಂದಿಸಿದರು. ಮಹಿಳಾ ಸಂಯೋಜಕಿ ಜೇಸಿ ಚಿತ್ರಪ್ರಭ ಹಾಗೂ ಎಲ್ಲಾ ಪೂರ್ವ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು

Related posts

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya
error: Content is protected !!