September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಬಳoಜ :ವಲಯದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ , ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮನುಷ್ಯರು ಬದುಕ ಬೇಕಾದರೆ ಪರಿಸರ ನಮಗೆ ತೀರಾ ಅವಶ್ಯವಾಗಿ ಬೇಕು ಗಿಡವನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಯೋಜನೆಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಪ್ರಮೋದ್ ಕುಮಾರ್ ಜೈನ ಮಾತನಾಡಿ ಕಾಡಿನಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುತ್ತದೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗುತ್ತದೆ , ಆದರಿಂದ ಎಲ್ಲರೂ ಗಿಡಗಳನ್ನು ನೆಟ್ಟು ಅದರ ರಕ್ಷಣೆ ಮಾಡಬೇಕು ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದೇಜಪ್ಪ ಪೂಜಾರಿ, ಬಳoಜ ಗ್ರಾಮ ಪಂಚಾಯತ್ ಸದಸ್ಯೆ & ವಿಪತ್ತು ಘಟಕದ ಬೇಬಿ ನಾರಾಯಣ, ಸ್ವಚ್ಛತಾ ಸೇನಾನಿ ಅಬೂಬಕರ್, ತಾಲೂಕು ನೋಡಲ್ ಅಧಿಕಾರಿ ಸುರೇಶ್ , ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿ ಪ್ರಮೀಳಾ & ಪ್ರಗತಿ ಬಂಧು, ಸ್ವಸಹಾಯ & ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಲಡ್ಡು ವಿತರಣೆ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya
error: Content is protected !!