September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ 49ನೇ ವರ್ಷದ ನೂತನ ಸಮಿತಿಯನ್ನು ರಚಿಸಲಾಯಿತು.ಅಧ್ಯಕರಾಗಿ ಚಂದ್ರಕಾಂತ ಪ್ರಭು ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬಂಗೇರ ಕೂಳೂರು ಇವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ 48ನೇ ಸಾಲಿನ ಕಾರ್ಯದರ್ಶಿ ವಿಜಯ ಕುಮಾರ್ ರೈ ಇವರು 2024ನೇ ಸಾಲಿನ ಆಯ-ವ್ಯಯ ವೆಚ್ಚವನ್ನು ಮಂಡಿಸಿದರು. ಸಮಿತಿಯ ಉಪಾಧ್ಯಕ್ಷ ಕೊರಗಪ್ಪ ನಾಯ್ಕ ಇವರು ಇತ್ತೀಚಿಗೆ ನಿಧನರಾದ ಗಜಾನನ ವಝ,ಜಯರಾಮ್ ಕೆ, ಕಲ್ಯಾಣಿ ಹಾಗೂ ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ಎಲ್ಲರಿಗೂ ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ನುಡಿ ನಮನ ಸಲ್ಲಿಸಿದರು.

ಯಶವಂತ ಶೆಟ್ಟಿ ಪ್ರಾರ್ಥಿಸಿದರು. ವಿಜಯ ಕುಮಾರ್ ರೈ , ಸ್ವಾಗತಿಸಿ ಗಣೇಶ್ ಬಂಗೇರ ಕೂಳೂರು ವಂದಿಸಿದರು.

Related posts

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya
error: Content is protected !!