23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya
error: Content is protected !!