September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya
error: Content is protected !!