23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪ್ರಯುಕ್ತ ‘ಸೇಪ್ಟಿ ರೈಡ್’ ಜಾಗೃತಿ ಅಭಿಯಾನ

Suddi Udaya
error: Content is protected !!