25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya
error: Content is protected !!