24.6 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಇಲ್ಲಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 21 ವರ್ಷದ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಭೋಜರಾಜ್ ಪ್ರಗತಿನಗರ, ಕಾರ್ಯದರ್ಶಿಯಾಗಿ ಅರವಿಂದ್ ಶೆಟ್ಟಿ ರಾಘವೇಂದ್ರನಗರ , ಕೋಶಾಧಿಕಾರಿಯಾಗಿ ಸುಜಿತ್ ಗುರಿಂಗಾನ, ಉಪಾಧ್ಯಕ್ಷರಾಗಿ ಪವನ್ ಗಾಂಧಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶ ನಗರ ( ಸಿರಿ), ಕ್ರೀಡಾ ಕಾರ್ಯದರ್ಶಿಯಾಗಿ ವಿಜೀತ್ ಗುರಿಂಗಾನ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶನಗರ , ಜೊತೆ ಕೋಶಾಧಿಕಾರಿಯಾಗಿ ನಾಗೇಶ್ ಹೆಗ್ಡೆ ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್ ಇವರನ್ನು ಮುಂದುವರಿಸಲಾಯಿತು. ಅನ್ನಸಂತರ್ಪಣೆ ಸಮಿತಿಯ ಸಂಚಾಲಕರಾಗಿ ಅಜಯ್ ಶಿವಾಜಿನಗರ, ಸುರೇಶ್ ರಾಘವೇಂದ್ರ ನಗರ ಇವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು, ಸಲಹೆಗಾರರಾದ ಆರ್.ರಮೇಶ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya
error: Content is protected !!