30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿ ಉಳಿದ ಘಟನೆ ಜೂ. 15 ರಂದು ನಡೆದಿದೆ.

ಸವಣಾಲು ಗ್ರಾಮದ ಮಂಜದಬೆಟ್ಟುವಿನಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಪ್ರದೇಶವನ್ನು ಸಂಪರ್ಕಿಸುವ ಕೂಡುಜಾಲು ಎಂಬಲ್ಲಿ ಹರಿಯುತ್ತಿರುವ ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ ಸುಳ್ಯೋಡಿ ನಿವಾಸಿ ಸಂಜೀವ ಪೂಜಾರಿ ಎಂಬವರು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ನದಿಯನ್ನು ಬೈಕ್ ಸಮೇತ ದಾಟುವ ಸಂದರ್ಭದಲ್ಲಿ ನದಿ ನೀರಿನಲ್ಲಿ ಕೊಚ್ಚಿ ಹೋಗಿರುತ್ತಾರೆ. ಅದೃಷ್ಟವಶಾತ್ ಬೈಕ್ ನದಿ ಬದಿಯಲ್ಲಿ ಸಿಲುಕಿದ್ದು , ಯುವಕರಿಬ್ಬರು ಯಾವುದೋ ಬಳ್ಳಿಯ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ಬದುಕುಳಿದಿದ್ದಾರೆ.

Related posts

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

Suddi Udaya

ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಂಟ ಸಮಾಜದಿಂದ ಅಭಿನಂದನೆ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರ್ ಜಿಲ್ಲಾ ಈಜು ಸ್ಪರ್ಧೆ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!