July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

ಪುದುವೆಟ್ಟು: ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮದ್ಯದ ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ವಶಪಡಿಸಿಕೊಂಡ ಘಟನೆ ಜೂ. 16 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬೊಳ್ಮನಾರು ನಿವಾಸಿ ಪುರುಷೋತ್ತಮ ಎಂಬಾತನ ಮನೆಯ ತೋಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಮದ್ಯ ಸಂಗ್ರಹಿಸಿಟ್ಟ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಜೂ.16 ರಂದು ಸಂಜೆ 6 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಪುರುಷೋತ್ತಮ ಎಂಬಾತನ ಮನೆಯ ತೋಟದ ಮೇಲೆ ದಾಳಿ ಮಾಡಿ 4.860 ಲೀಟರ್ 54 ಎಂ.ಎಲ್. ಮೈಸೂರು ಲ್ಯಾನ್ಸರ್ ವಿಸ್ಕಿ ಮದ್ಯ ವಶಪಡಿಸಿಕೊಂಡಿದ್ದಾರೆ.

ಇದರ ಅಂದಾಜು ಮೌಲ್ಯ 2,700 ರೂಪಾಯಿ ಅಗಿದ್ದು. ಈ ಮದ್ಯ ಮರಾಟಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ ಕೊರಗಪ್ಪ ಪೂಜಾರಿ ಮಗ ಪುರುಷೋತ್ತಮ(40) ಎಂಬಾತನನ್ನು ಬಂಧಿಸಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Related posts

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಡಂಗಡಿ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya
error: Content is protected !!