ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

ಉಜಿರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ಸಾಗಿತು.

ಜಾಥಾಕ್ಕೆ ವಕೀಲರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ವಸಂತ ಮರಕಡ ಚಾಲನೆ ನೀಡಿದರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಿರಸಿ ಪರಿಸರ ಬರಹಗಾರ, ಪರಿಸರ ತಜ್ಞ ಶಿವಾನಂದ ಕಳವೆ ದೀಪ ಪ್ರಜ್ವಲಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ‌.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ‌.ಅಶೋಕ್ ಕುಮಾರ್ ವಹಿಸಿದ್ದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳಪುಳೆ,ಎಸ್.ಡಿ.ಎಂ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಿದರು.

ಎಸ್.ಡಿ.ಎಂ ಸೆಕಂಡರಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಪ್ರಾಧ್ಯಾಪಕ ಡಾ.ಶ್ರೀಧರ ಭಟ್ಟ ಕಾರ್ಯಕ್ರಮ ನಿರೂಪಿಸಿದರು. ಶ್ರೀ.ಧ.ಮಂ.ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ ವಿಶ್ವನಾಥ ಸ್ವಾಗತಿಸಿದರು.ಬಳಿಕ ಎಸ್.ಡಿ.ಎಂ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Related posts

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya

ಜು.5 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya
error: Content is protected !!