24.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

ವೇಣೂರು: ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜೂ. 17 ರಂದು ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿ, ಪಲ್ಲಂದೋಡಿ ಬಜಿರೆಯಲ್ಲಿ “ಸಂಸ್ಕಾರ ಸಿಂಧೂರ” ಎಂಬ ಕಾರ್ಯಕ್ರಮದಡಿ ಸನಾತನ ಸಂಸ್ಕೃತಿಯ ಮೆಲುಕು -ಚಿಂತನ ಮಂಥನ ಕಾರ್ಯಕ್ರಮ ಆರಂಭಗೊಂಡಿತು.

ಜಂತೋಡಿಗುತ್ತು ಪ್ರವೀಣ್ ಚಂದ್ರ ಜೈನ್ ರವರಿಂದ ದೀಪೋಜ್ವಲನದ ಮೂಲಕ ಉದ್ಘಾಟನೆಯಾದ ಕಾರ್ಯಕ್ರಮದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲೆ ಯ ಅಧ್ಯಕ್ಷ ತಾರಾನಾಥ ಕೊಟ್ಟಾರಿ, ಫರೆಂಗಿಪೇಟೆ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಗೌರವಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ, ಸಂಸ್ಕಾರ ಭಾರತೀ ಕರ್ನಾಟಕ ಪ್ರಾಂತ ದ ಸಹ ಕಾರ್ಯದರ್ಶಿ ನಾಗರಾಜ ಶೆಟ್ಟಿ, ಮಂಗಳೂರು, ವೇಣೂರಿನ ಉದ್ಯಮಿಗಳಾದ ಭಾಸ್ಕರ್ ಪೈ, ಸಂಸ್ಕಾರ ಭಾರತೀ ದ.ಕ.ದ ಕೋಶ ಪ್ರಮುಖ್ ಶ್ರೀಮತಿ ವಿಜಯಾ ಬಿ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಥಮ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಜನನದಿಂದ ಮರಣದವರೆಗಿನ ಆಚರಣೆಗಳಲ್ಲಿನ ಬದಲಾವಣೆಗಳು ಎಂಬ ವಿಚಾರದಲ್ಲಿ ಚಿಂತನೆ ನಡೆಸಿದವರು ಸಾಮರಸ್ಯ ಟೋಳಿಯ ವಿಭಾಗ ಪ್ರಮುಖ್ ಸುರೇಶ್ ನರ್ಕಳ, ಸಂ‌.ಭಾ.ಕರ್ನಾಟಕ ಪ್ರಾಂತದ ಕೋಶ ಪ್ರಮುಖ್ ರಘುವೀರ್ ಗಟ್ಟಿ, ಸಂ.ಭಾ.ದ.ಕ ಜಿಲ್ಲೆಯ ಉಪಾಧ್ಯಕ್ಷ ದತ್ತಾತ್ರೇಯ ರಾವ್ ಪುತ್ತೂರು, ಸಂ.ಭಾ.ದ.ಕ.ಜಿಲ್ಲೆಯ ಸಾಹಿತ್ಯ ಸಂಯೋಜಕರಾದ ಶ್ರೀಮತಿ ಶಂಕರಿ ಶರ್ಮ ಪುತ್ತೂರು ಉಪಸ್ಥಿತರಿದ್ದರು.

ಸಂ.ಭಾ.ದ.ಕ.ಜಿಲ್ಲೆಯ ಕಾರ್ಯಕಾರಿಣಿ ಸದಸ್ಯ ಪಿ.ಎನ್.ಪರುಷೋತ್ತಮ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya
error: Content is protected !!