24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!