24.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!