September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಜೆಸಿಐ ಮಡಂತ್ಯಾರಿನಿಂದ “ಪ್ರಯಾಸ್ ಡೇ” ಮತ್ತು “ವಿಶ್ವ ಪರಿಸರ ದಿನ ಆಚರಣೆ”

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!