July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!