24.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya
error: Content is protected !!