25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
error: Content is protected !!