July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!