23.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಹೊಸದಾಗಿ ತರಬೇತಿಗೊಂಡು ಆಗಮಿಸಿದ ಸ್ಕೌಟ್ ಗೈಡ್ ಶಿಕ್ಷಕರಿಗೆ ಚೈತನ್ಯ ತುಂಬುವ ಚೇತರಿಕಾ ಶಿಬಿರ ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಮುರಳಿಧರ್ ಆಗಮಿಸಿ ಶಿಕ್ಷಕರಿಗೆ ಸ್ಕಾರ್ಫ್ ತೊಡಿಸಿ, ಪ್ರತಿಜ್ಞಾವಿಧಿಯನ್ನು ವಾಚಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಇನ್ಸ್ಪೆಕ್ಟರ್ ಮುರುಳಿಧರ್ ರವರು ಮಾತನಾಡಿ ಸ್ಕೌಟ್ ಗೈಡ್ ನ ಮಹತ್ವ ಸಮಾಜಕ್ಕೆ ಒಂದು ಮಾದರಿ ಹಾಗೆಯೇ ಮಕ್ಕಳು ಶಿಸ್ತು, ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬಹುದು ಎಂಬುದನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಅಭಿನಂದನೆಯನ್ನು ತಿಳಿಸಿದರು. ಸ್ಕೌಟ್ ಮಾಸ್ಟರ್ ಗಳಾದ ಮಂಜುನಾಥ್, ಜಯರಾಮ್, ಶ್ರೀಮತಿ ರಮ್ಯ ,ಶ್ರೀಮತಿ ಗೀತಾ ಪಿ, ಕಬ್ ಮಾಸ್ಟರ್ ಗಳಾದ ಶ್ರೀಮತಿ ನೀತಾ ಕೆ ಎಸ್, ಶ್ರೀಮತಿ ಜಯಲಕ್ಷ್ಮಿ, ಪ್ಲಾಕ್ ಲೀಡರ್ ಪ್ರಮೀಳಾ ಉಪಸ್ಥಿತರಿದ್ದರು. ಕಬ್ ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರಮೀಳಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕಿನ ಹಲವೆಡೆ ಉತ್ತಮ ಮಳೆ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya
error: Content is protected !!