24.5 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು ಇನ್ನಷ್ಟು ಮರ, ಹಾಗೂ ಗುಡ್ಡ ಕುಸಿದು ಬೀಳುವ ಸಂಭವವಿದ್ದು ಮನೆಗೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.


ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರ್ಥಿಕ ಸಹಾಯ ನೀಡಿ, ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.


ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ, ಪ್ರಮುಖರಾದ ಪ್ರಶಾಂತ್ ಗೌಡ ನಿರುoಬುಡ ಹಾಗೂ ಮನೆಯವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ಮದ್ದಡ್ಕ: ಬಲ್ಕತ್ಯಾರು ನಿವಾಸಿ ಶಾಮಣ್ಣ ನಾಯಕ್ ನಿಧನ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya
error: Content is protected !!