25.8 C
ಪುತ್ತೂರು, ಬೆಳ್ತಂಗಡಿ
June 18, 2025
ಶಾಲಾ ಕಾಲೇಜು

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

ಗೇರುಕಟ್ಟೆ :ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣಾ ಕಾರ್ಯಕ್ರಮವು ಜೂ 17.ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ನಡೆಯಿತು.

ಕಳಿಯ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಶ್ರೀಮತಿ ಇಂದಿರಾ ಬಿ. ಶೆಟ್ಟಿ ಹಾಗೂ ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಮುದ್ದುಂಜ ಇವರ ನೇತೃತ್ವದಲ್ಲಿ 8,9,10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. , ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಇಂದಿರಾ ಮಾತನಾಡಿ ವಿದ್ಯೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ನೀಡಿರುವಂತಹ ಉಚಿತ ನೋಟ್ ಪುಸ್ತಕಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪರಿಣಾಮಕಾರಿಯಾಗಲಿ ಎಂದು ಹಾರೈಸಿದರು. ಎಸ್. ಡಿ.ಎಂ. ಸಿ. ಉಪಾಧ್ಯಕ್ಷರಾದ ಶ್ರೀ ಗೋಪಾಲಗೌಡ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸುಂದರ ಭಾರತ ಪ್ರತಿಷ್ಠಾನದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕರಾದ ಈಶ್ವರಿ ಕೆ. ಇವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಂಘ ಸಂಸ್ಥೆಗಳವರು ನೀಡುವ ಇಂತಹ ಕೊಡುಗೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಲಿವೆ. ಇನ್ನೂ ಹೆಚ್ಚಿನ ಸಹಕಾರ ಸಂಘ-ಸಂಸ್ಥೆಗಳಿಂದ, ಊರ ದಾನಿಗಳಿಂದ, ಹಿರಿಯ ವಿದ್ಯಾರ್ಥಿಗಳಿಂದ ದೊರೆಯಲಿ ಎಂದು ಹಾರೈಸಿ, ಸುಂದರ ಭಾರತ ಪ್ರತಿಷ್ಠಾನ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಶಾಲಾ ಶಿಕ್ಷಕರು ಪ್ರತಿಷ್ಠಾನದವರಿಗೆ ಕೃತಜ್ಞತೆಗಳನ್ನು ತಿಳಿಸುತ್ತಾ ಪುಸ್ತಕ ವಿತರಣೆಗೆ ಸಹಕರಿಸಿದರು.

Related posts

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜಿನ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!