September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

ಪುದುವೆಟ್ಟು: ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮದ್ಯದ ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ವಶಪಡಿಸಿಕೊಂಡ ಘಟನೆ ಜೂ. 16 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬೊಳ್ಮನಾರು ನಿವಾಸಿ ಪುರುಷೋತ್ತಮ ಎಂಬಾತನ ಮನೆಯ ತೋಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಮದ್ಯ ಸಂಗ್ರಹಿಸಿಟ್ಟ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಜೂ.16 ರಂದು ಸಂಜೆ 6 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಪುರುಷೋತ್ತಮ ಎಂಬಾತನ ಮನೆಯ ತೋಟದ ಮೇಲೆ ದಾಳಿ ಮಾಡಿ 4.860 ಲೀಟರ್ 54 ಎಂ.ಎಲ್. ಮೈಸೂರು ಲ್ಯಾನ್ಸರ್ ವಿಸ್ಕಿ ಮದ್ಯ ವಶಪಡಿಸಿಕೊಂಡಿದ್ದಾರೆ.

ಇದರ ಅಂದಾಜು ಮೌಲ್ಯ 2,700 ರೂಪಾಯಿ ಅಗಿದ್ದು. ಈ ಮದ್ಯ ಮರಾಟಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ ಕೊರಗಪ್ಪ ಪೂಜಾರಿ ಮಗ ಪುರುಷೋತ್ತಮ(40) ಎಂಬಾತನನ್ನು ಬಂಧಿಸಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!