23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

ಪುದುವೆಟ್ಟು: ಅಕ್ರಮವಾಗಿ ಮಧ್ಯ ಸಂಗ್ರಹಿಸಿ ಮನೆಯ ತೋಟದಲ್ಲಿ ಶೇಖರಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮದ್ಯದ ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮದ್ಯ ವಶಪಡಿಸಿಕೊಂಡ ಘಟನೆ ಜೂ. 16 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬೊಳ್ಮನಾರು ನಿವಾಸಿ ಪುರುಷೋತ್ತಮ ಎಂಬಾತನ ಮನೆಯ ತೋಟದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಮದ್ಯ ಸಂಗ್ರಹಿಸಿಟ್ಟ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿದಾರರಿಂದ ಬಂದ ಖಚಿತ ಮಾಹಿತಿ ಮೇರೆಗೆ ಜೂ.16 ರಂದು ಸಂಜೆ 6 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ಸಿಬ್ಬಂದಿ ಪುರುಷೋತ್ತಮ ಎಂಬಾತನ ಮನೆಯ ತೋಟದ ಮೇಲೆ ದಾಳಿ ಮಾಡಿ 4.860 ಲೀಟರ್ 54 ಎಂ.ಎಲ್. ಮೈಸೂರು ಲ್ಯಾನ್ಸರ್ ವಿಸ್ಕಿ ಮದ್ಯ ವಶಪಡಿಸಿಕೊಂಡಿದ್ದಾರೆ.

ಇದರ ಅಂದಾಜು ಮೌಲ್ಯ 2,700 ರೂಪಾಯಿ ಅಗಿದ್ದು. ಈ ಮದ್ಯ ಮರಾಟಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ಪುದುವೆಟ್ಟು ಗ್ರಾಮದ ಬೊಳ್ಮನಾರು ನಿವಾಸಿ ಕೊರಗಪ್ಪ ಪೂಜಾರಿ ಮಗ ಪುರುಷೋತ್ತಮ(40) ಎಂಬಾತನನ್ನು ಬಂಧಿಸಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Related posts

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!