25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

ಉಜಿರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ಸಾಗಿತು.

ಜಾಥಾಕ್ಕೆ ವಕೀಲರ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷರಾದ ವಸಂತ ಮರಕಡ ಚಾಲನೆ ನೀಡಿದರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಸಿರಸಿ ಪರಿಸರ ಬರಹಗಾರ, ಪರಿಸರ ತಜ್ಞ ಶಿವಾನಂದ ಕಳವೆ ದೀಪ ಪ್ರಜ್ವಲಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ‌.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ‌.ಅಶೋಕ್ ಕುಮಾರ್ ವಹಿಸಿದ್ದರು.

ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತುಳಪುಳೆ,ಎಸ್.ಡಿ.ಎಂ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಿದರು.

ಎಸ್.ಡಿ.ಎಂ ಸೆಕಂಡರಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಪ್ರಾಧ್ಯಾಪಕ ಡಾ.ಶ್ರೀಧರ ಭಟ್ಟ ಕಾರ್ಯಕ್ರಮ ನಿರೂಪಿಸಿದರು. ಶ್ರೀ.ಧ.ಮಂ.ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ ವಿಶ್ವನಾಥ ಸ್ವಾಗತಿಸಿದರು.ಬಳಿಕ ಎಸ್.ಡಿ.ಎಂ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya
error: Content is protected !!