25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

ವೇಣೂರು: ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜೂ. 17 ರಂದು ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿ, ಪಲ್ಲಂದೋಡಿ ಬಜಿರೆಯಲ್ಲಿ “ಸಂಸ್ಕಾರ ಸಿಂಧೂರ” ಎಂಬ ಕಾರ್ಯಕ್ರಮದಡಿ ಸನಾತನ ಸಂಸ್ಕೃತಿಯ ಮೆಲುಕು -ಚಿಂತನ ಮಂಥನ ಕಾರ್ಯಕ್ರಮ ಆರಂಭಗೊಂಡಿತು.

ಜಂತೋಡಿಗುತ್ತು ಪ್ರವೀಣ್ ಚಂದ್ರ ಜೈನ್ ರವರಿಂದ ದೀಪೋಜ್ವಲನದ ಮೂಲಕ ಉದ್ಘಾಟನೆಯಾದ ಕಾರ್ಯಕ್ರಮದಲ್ಲಿ ಸಂಸ್ಕಾರ ಭಾರತೀ ದ.ಕ.ಜಿಲ್ಲೆ ಯ ಅಧ್ಯಕ್ಷ ತಾರಾನಾಥ ಕೊಟ್ಟಾರಿ, ಫರೆಂಗಿಪೇಟೆ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಕಾರ ಭಾರತೀ ದ.ಕ.ಜಿಲ್ಲೆಯ ಗೌರವಾಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ, ಸಂಸ್ಕಾರ ಭಾರತೀ ಕರ್ನಾಟಕ ಪ್ರಾಂತ ದ ಸಹ ಕಾರ್ಯದರ್ಶಿ ನಾಗರಾಜ ಶೆಟ್ಟಿ, ಮಂಗಳೂರು, ವೇಣೂರಿನ ಉದ್ಯಮಿಗಳಾದ ಭಾಸ್ಕರ್ ಪೈ, ಸಂಸ್ಕಾರ ಭಾರತೀ ದ.ಕ.ದ ಕೋಶ ಪ್ರಮುಖ್ ಶ್ರೀಮತಿ ವಿಜಯಾ ಬಿ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಪ್ರಥಮ ಚಿಂತನ ಮಂಥನ ಕಾರ್ಯಕ್ರಮ ನಡೆಯಿತು. ಜನನದಿಂದ ಮರಣದವರೆಗಿನ ಆಚರಣೆಗಳಲ್ಲಿನ ಬದಲಾವಣೆಗಳು ಎಂಬ ವಿಚಾರದಲ್ಲಿ ಚಿಂತನೆ ನಡೆಸಿದವರು ಸಾಮರಸ್ಯ ಟೋಳಿಯ ವಿಭಾಗ ಪ್ರಮುಖ್ ಸುರೇಶ್ ನರ್ಕಳ, ಸಂ‌.ಭಾ.ಕರ್ನಾಟಕ ಪ್ರಾಂತದ ಕೋಶ ಪ್ರಮುಖ್ ರಘುವೀರ್ ಗಟ್ಟಿ, ಸಂ.ಭಾ.ದ.ಕ ಜಿಲ್ಲೆಯ ಉಪಾಧ್ಯಕ್ಷ ದತ್ತಾತ್ರೇಯ ರಾವ್ ಪುತ್ತೂರು, ಸಂ.ಭಾ.ದ.ಕ.ಜಿಲ್ಲೆಯ ಸಾಹಿತ್ಯ ಸಂಯೋಜಕರಾದ ಶ್ರೀಮತಿ ಶಂಕರಿ ಶರ್ಮ ಪುತ್ತೂರು ಉಪಸ್ಥಿತರಿದ್ದರು.

ಸಂ.ಭಾ.ದ.ಕ.ಜಿಲ್ಲೆಯ ಕಾರ್ಯಕಾರಿಣಿ ಸದಸ್ಯ ಪಿ.ಎನ್.ಪರುಷೋತ್ತಮ ರಾವ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya
error: Content is protected !!