27.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya
error: Content is protected !!