September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!