23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

ಕಲ್ಮಂಜ: ನಿಡಿಗಲ್ ಸೀಟು ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಿತಾರಣ್ಯದ ಕುಕ್ಕುದ ಕಟ್ಟೆ ಬಳಿ ಕಳೆದ ಮೂರು ದಿನಗಳಿಂದ ಬೈಕೊಂದು ಅನಾಥ ರೀತಿಯಲ್ಲಿ ಸೈಡ್ ಸ್ಯಾಂಡ್ ಹಾಕಿ ನಿಲ್ಲಿಸಿರುವುದು ಕಂಡುಬಂದಿದೆ.

ಮೇಲ್ನೋಟಕ್ಕೆ ಯಾರೋ ಬೈಕ್ ನಿಲ್ಲಿಸಿ ಬಹಿರ್ದೆಸೆಗೆ ಹೋಗಿರಬಹುದು ಎಂಬಂತೆ ಕಂಡು ಬರುವುದರಿಂದ ಯಾರೂ ನಿಲ್ಲಿಸಿರುವ ಬೈಕ್ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ ಅದರೆ ದಿನ ನಿತ್ಯ ಪ್ರಯಾಣಿಸುವ ವಾಹನ ಸವಾರರು ಈ ಬಗ್ಗೆ ಗಮನ ಹರಿಸಿ ಕಳೆದ 4 ದಿನಗಳಿಂದ ಬೈಕ್ ನಿಂತಲ್ಲಿಯೇ ಇದ್ದು, ಅದರ ಹ್ಯಾಂಡಲ್ ನಲ್ಲಿ ಪ್ಲಾಸ್ಟಿಕ್ ಚೀಲ ಹಾಗೂ ಒಂದು ಶರ್ಟ್ ಇದ್ದು. ರಾಮನಗರ ನೋಂದಾವಣೆಯ ನಂಬರ್ ಬೈಕ್ ನಲ್ಲಿ ಇದೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ.

ಯಾರೋ ಬೈಕ್ ರಸ್ತೆಯಲ್ಲೆ ಬಿಟ್ಟು ಎಲ್ಲಾದರೂ ಹೋಗಿದ್ದರೋ, ಏನಾದರೋ ಮಾಡಿಕೊಂಡಿದ್ದರೋ, ಕಳ್ಳತನ ಮಾಡಿದ ಬೈಕೊ ಅಥವಾ ಬೈಕ್ ಹಾಳಾಗಿದ್ದು ಅದನ್ನು ಅಲ್ಲೇ ಬಿಟ್ಟು ಹೋಗಿದ್ದರೋ ಒಂದು ವೇಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವವರ ಬೈಕ್ ಆಗಿದ್ದರೆ ನಿಂತಲ್ಲಿಯೇ ನಿಲ್ಲಿಸಲು ಸಾಧ್ಯವೇ, ಎನ್ನುವ ಅನುಮಾನ ಸ್ಥಳೀಯವಾಗಿ ಮೂಡುತಿದ್ದು, ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ತನಿಖೆಯಿಂದ ಸ್ಪಷ್ಟ ಉತ್ತರ ದೊರಕಲಿದೆ.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ತತ್ವಜ್ಞಾನಿಗಳ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!