ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!