July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!