23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ನಾರಾವಿ: ಬಸದಿಯಲ್ಲಿ ಧಾಮ ಸಂಪ್ರೋಕ್ಷಣಾಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!