July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

ಬಾಯ೯: ಇತೀಚೆಗೆ ಸುರಿದ ಭಾರಿಮಳೆಗೆ ಬಾರ್ಯಾ, ಪುತ್ತಿಲ ಗ್ರಾಮದ ಹಲವೆಡೆ ಗುಡ್ಡಕುಸಿದು ತುಂಬಾ ಮನೆಗಳಿಗೆ ಹಾನಿ ಸಂಭವಿಸಿದೆ.


ಕಡು ಬಡತನದಲ್ಲಿರುವ ಕೆಲವು ಕುಟುಂಬಗಳಿಗೆ ಎರಡು ಗ್ರಾಮದ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಮನೆಗೆ ಆದ ಹಾನಿ ಸರಿಪಡಿಸಲು ಮತ್ತು ಗುಡ್ಡ ಜರಿತದಿಂದ ಮನೆಗೆ ಬಿದ್ದ ಮಣ್ಣು ತೆರವು ಗೊಳಿಸಲು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಒಟ್ಟುಸೇರಿ ಬಿಜೆಪಿ ಸ್ಪಂದನ ಸಮಿತಿ ರಚನೆ ಮಾಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ ನೀಡಲಾಯಿತು. ಬಾರ್ಯಾ ಕೃಷಿಪತ್ತಿನ ಸಹಕಾರಿ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಪ್ರಸನ್ನ ಗೌಡ, ಬಾರ್ಯಾ ಗ್ರಾಮ ಪಂಚಾಯತ್ ಅಧ್ಯಕ್ಷರರಾದ ಪ್ರಶಾಂತ್ ಪೈ, ರಾಜೇಶ್ ರೈ, ಮೋನಪ್ಪ ಗೌಡ ಮನಿಲ,ಗೌತಮ್ ಗೌಡ, ಗ್ರಾಮ ಪಂಚಾಯತ್ ಸದಸ್ಯರು ಧರ್ಣಪ್ಪ ಗೌಡ, ಮೋಹನ್ ಅಜಿರ ಮತ್ತಿತರ ದಾನಿಗಳ ನೆರವಿನಿಂದ ಅಜಿರಕೋಂಕೇರಿ, ಪೆಲತ್ತಾಜೆ, ಪೆರಿಯೊಟ್ಟುಗಳಲ್ಲಿ ಯಂತ್ರದ ಮೂಲಕ ಮಣ್ಣು ತೆಗೆಸಲಾಯಿತು ಹಾಗೂ ಯಂತ್ರ ಹೋಗದ ಕಡೆಗಳಲ್ಲಿ ಕೂಲಿಯಾಳುಗಳ ಮೂಲಕ ತೆಗೆಸಲು ಸಹಾಯಧನ ನೀಡಲಾಯಿತು.


ಮೋಹನ ಗೌಡ ಅಜಿರ, ಪ್ರಸನ್ನ ಗೌಡ, ಪ್ರಶಾಂತ್ ಪೖ, ರಾಜೇಶ್ ರೈ, ಶಿವರಾಮ ಬಾರ್ಯ, ಹೇಮಾವತಿ, ಪ್ರವೀಣ್ ರೖ ಹಾಗೂ ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಅನಾರೋಗ್ಯದಿಂದ ಬಳಲುತ್ತಿರುವ ಅನಿತಾ ದರ್ಖಾಸು ಅವರಿಗೆ ರೂ.10,000 ಚೆಕ್ಕನ್ನು ನೀಡಲಾಯಿತು.

Related posts

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!